ಉಡುಪಿ ಜಿಲ್ಲಾ ನೂತನ ಎಸ್‌ಪಿಯಾಗಿ ಡಾ. ಅರುಣ್ ಅಧಿಕಾರ ಸ್ವೀಕಾರ

Spread the love

ಉಡುಪಿ ಜಿಲ್ಲಾ ನೂತನ ಎಸ್‌ಪಿಯಾಗಿ ಡಾ. ಅರುಣ್ ಅಧಿಕಾರ ಸ್ವೀಕಾರ
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ ಐಪಿಎಸ್ ಅವರು ಗುರುವಾರ ಸೆ.07ರಂದು ಅಧಿಕಾರ ಸ್ವೀಕರಿಸಿದರು.

ನಿಕಟಪೂರ್ವ ಎಸ್‌ಪಿ ಅಕ್ಷಯ್ ಮಚೀಂದ್ರ ನೂತನ ಎಸ್ಪಿಯವರಿಗೆ ದಂಡ ಹಸ್ತಾಂತರಿಸುವ ಮೂಲಕ ಅಧಿಕಾರ ನೀಡಿದರು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರುಣ್ ಕೆ. ಅವರು, ಕಾನೂನು ಬಾಹಿರ ಚಟುವಟಿಕೆಗಳಿಗೆ ಕಠಿಣ ಕ್ರಮ ಜರುಗಿಸುವುದಲ್ಲದೇ, ನೈತಿಕ ಪೊಲೀಸ್‌ಗಿರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಸಾರ್ವಜನಿಕ ಸ್ನೇಹಿ ಪೊಲೀಸ್ ನಮ್ಮ ಇನ್ನೊಂದು ಪ್ರಮುಖ ಆದ್ಯತೆ ಆಗಿದೆ. ವೃತ್ತಿಪರ ರೀತಿಯಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಅಲಿಸಲಾಗುವುದು . ಮಾದಕ ವಸ್ತುಗಳಿಗೆ ಕಡಿವಾಣ ಹಾಕುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ. ಅದರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

Right Click Disabled