ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಪದಗ್ರಹಣ ಸಮಾರಂಭ

Spread the love


ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರೊಂದಿಗೆ ಮುಕ್ತ ಚರ್ಚಾ ಕಾರ್ಯಕ್ರಮ ವು ದಿನಾಂಕ 08.10.23 ರ ಆದಿತ್ಯವಾರ ಬೆಳಿಗ್ಗೆ 10.30 ಗಂಟೆಗೆ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸುವ ಕುರಿತು ಹಾಗೂ ಅಕ್ಟೋಬರ್ ತಿಂಗಳ 5 ನೇ ದಿನಾಂಕ ದಂದು ನಡೆಯಲಿರುವ ದತ್ತಾಪೀಠ ಚಲೋ ಕಾರ್ಯಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಈ ಸಮಾರಂಭದಲ್ಲಿ ಸಂಘಟನೆಯ ರಾಜ್ಯ ಪ್ರ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್, ವಿಭಾಗ ಅಧ್ಯಕ್ಷ ಮಧುಸೂದನ್ ಊರ್ವಸ್ಟೋರ್ ಮುಖ್ಯ ಅತಿಥಿ ಯಾಗಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಪ್ರಕಟಣೆಯಲ್ಲಿ ತಿಳಿಸಿದೆ.

Right Click Disabled