ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ : ಆರೋಪಿಯ ಸುಳಿವು ಪತ್ತೆ.?…!!

Spread the love

ಉಡುಪಿ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ಆರೋಪಿಯ ಹೆಡೆಮುರಿ ಕಟ್ಟಿದ ಉಡುಪಿ ಡಿವೈಎಸ್‌ಪಿ ದಿನಕರ್ ಪಿ. ನೇತೃತ್ವದ ತಂಡ ಕೇರಳದ ಕೊಟ್ಟಾಯಂ ನಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂಬ ಪೊಲೀಸ್ ಮಾಹಿತಿ ಲಭಿಸಿದೆ.

ಉಡುಪಿಯ ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಿಸಿಟಿವಿ ಜಾಡು ಹಿಡಿದು ತನಿಖೆಯನ್ನು ಚುರುಕುಗೊಳಿಸಿದ್ದರು. ಭೀಕರ ಹತ್ಯೆಗೈದ ಬಳಿಕ ಕಿಲ್ಲರ್ ಸಾಗಿರುವ ವಿವಿಧ ಪ್ರದೇಶಗಳ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದರು.

ಸಂತೆಕಟ್ಟೆಯಿಂದ, ಉಡುಪಿ ಕರಾವಳಿ ಬೈಪಾಸ್, ಅಲ್ಲಿಂದ ಅಂಬಲಪಾಡಿ, ಕಿನ್ನಿಮುಲ್ಕಿ, ಬಲಾಯಿಪಾದೆ ಹಾಗೂ ಉದ್ಯಾವರ, ಅಲ್ಲಿಂದ ಕಟಪಾಡಿವರೆಗೆ ಸಾಗಿರುವ ಸಿಸಿಟಿವಿ ಫುಟೇಜ್‌ಗಳ ಜಾಡು ಹಿಡಿದ ಪೊಲೀಸರ ತಂಡವು ಕಾಸರಗೋಡು, ಕೇರಳ ಕಡೆ ತೆರಳಿ ವ್ಯಾಪಕ ಶೋಧ ನಡೆಸಿವೆ ಎನ್ನಲಾಗಿಹಾಗೂ
ಸಂತೆಕಟ್ಟೆಯಿಂದ ಉಡುಪಿ ಕರಾವಳಿ ಬೈಪಾಸ್‌ನ ವರೆಗೆ ರಿಕ್ಷಾದಿಂದ ಬಂದು ಇಳಿದ ಹಂತಕ, ಅಲ್ಲೇ ಸಮೀಪದ ಜೆಪಿ ಲೈಟ್‌ನ ಹಿಂಬದಿಗೆ ತೆರಳಿ ಕೂಡಲೇ ವಾಪಾಸ್ಸು ಬಂದಿದ್ದಾನೆ. ಬಳಿಕ ಅಲ್ಲಿಂದ ಮತ್ತೊಂದು ಬೈಕ್‌ನ ಸಹಾಯದಿಂದ ಕಿನ್ನಿಮೂಲ್ಕಿ ತನಕ ಹೋಗಿದ್ದಾನೆ.

ಆರೋಪಿ ಕೊಲೆಗೈದ ಬಳಿಕ ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿ ಪರಿಶೀಲನೆ ಮೂಲಕ ಪತ್ತೆ ಹಚ್ಚಿದ ಪೊಲೀಸರ ತಂಡವು ಮಂಗಳೂರು, ತಲಪಾಡಿ, ಕಾಸರಗೋಡು, ಕೇರಳ ರಾಜ್ಯಕ್ಕೆ ಹೋಗಿ ವ್ಯಾಪಕ ಶೋಧ ನಡೆಸಿದ್ದು ಆರೋಪಿಯು ಕೊಟ್ಟಾಯಂನಲ್ಲಿ ಇರುವ ಮಾಹಿತಿ ಲಭ್ಯವಾಗಿದ್ದು, ಆತನನ್ನು ಬಂಧಿಸಲು ಪೊಲೀಸರ ತಂಡ ಬಲೆ ಬೀಸಿದೆ.

Right Click Disabled