.22-ಅ.3ರವರೆಗೆ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” ದಶಮಾನೋತ್ಸವ ಸಂಭ್ರಮ

ಸೆ
ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ” ಉಡುಪಿ ದಸರಾ” ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.22ರಂದು ಬೆಳಿಗ್ಗೆ 9ಕ್ಕೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪನೆ. ಪ್ರತೀ ದಿನ ದುರ್ಗಾಹೋಮ, ಅ. 1ರಂದು ಚಂಡಿಕಾಹೋಮ, ಸೆ.25 ರಂದು ಶ್ರೀ ದುರ್ಗಾ ನಮಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದರು.
ಸಾಂಸ್ಕೃತಿಕ ಸಂಭ್ರಮ: ನವರಾತ್ರಿ ಉತ್ಸವದಲ್ಲಿ ಭಜನಾ ಕಾರ್ಯಕ್ರಮ, ಸಂಗೀತ, ನೃತ್ಯ ಸಿಂಚನ, ಯಕ್ಷಗಾನ, ನಾಟಕ, ಜನಪದ ಕಲರವ, ದಾಂಡಿಯಾ, ಕುಣಿತ ಭಜನೆ, ವಿವಿಧ ಸ್ಪರ್ಧೆಗಳು ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರಥಮ ಭಾರಿಗೆ ದ್ವಂದ್ವ ಭಜನಾ ಜುಗಲ್ ಬಂದಿ ನಡೆಯಲಿದೆ. ಸೆ.25ರಂದು ಸಂಜೆ 4ಗಂಟೆಗೆ ಮಾತೃ ಸಂಗಮ ಕಾರ್ಯಕ್ರಮ ನಡೆಯಲಿದೆ.
ಭವ್ಯ ಶೋಭಾಯಾತ್ರೆ: ಅ. 3ರಂದು ಉಡುಪಿ ಶ್ರೀ ಕೃಷ್ಣ ಮಠದಿಂದ ಭವ್ಯ ಶೋಭಾಯಾತ್ರೆ ಹೊರಡಲಿದ್ದು, ಉಡುಪಿ ನಗರದ ಮುಖ್ಯ ಮಾರ್ಗದಲ್ಲಿ ಸಾಗಿ ವಡಭಾಂಡೇಶ್ವರ ಬಲರಾಮನ ಸನ್ನಿಧಿಯ ಸಮುದ್ರ ತೀರದಲ್ಲಿ ಸಮಾಪನಗೊಂಡು ಜಲಸ್ತಂಭನಗೊಳಿಸಲಾಗುವುದು ಎಂದು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರರಾದ ಪ್ರಸನ್ನ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಭಟ್, ಮುರಳಿ ತಂತ್ರಿ, ರಾಧಾಕೃಷ್ಣ ಮೆಂಡನ್, ತಾರಾ ಆಚಾರ್ಯ, ವೀಣಾ ಶೆಟ್ಟಿ, ಪದ್ಮಾ ರತ್ನಾಕರ್ ಮೊದಲಾದವರು ಉಪಸ್ಥಿತರಿದ್ದರು.
